top of page
೧೯೪೪ರಲ್ಲಿ ಕುವೆಂಪು ರಚಿಸಿದ ‘ಶೂದ್ರ ತಪಸ್ವಿ ’ ನಾಟಕಕ್ಕೆ ರಾಮಾಯಣದ ಒಂದು ತುಣುಕನ್ನು ಕಥೆಯಾಗಿ ಆಯ್ದು ಕೊಂಡಿದ್ದಾರೆ. ಶೂದ್ರ ತಪಸ್ವಿ ನಾಟಕವು ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಬಹುಮಖ್ಯವಾಗಿದ್ದು ಶೋಷಿತರ ಗಟ್ಟಿಧ್ವನಿಯಾಗಿ ಹೊರಹೊಮ್ಮುತ್ತಲೇ ಅಂದಿನ ಮೇಲ್ವರ್ಗದ ಘಟಾನುಘಟಿ ಸಾಹಿತಿ, ಟಿಕೇಕಾರರ ವಾಗ್ದಾಳಿ ಮತ್ತು ಅಸಡ್ಡೆಗಳನ್ನ ಧೂಳಿಪಟ ಮಾಡಿ ಒಂದು ಅದ್ಭುತ ಕೃತಿಯಾಗಿ, ಕೆಳವರ್ಗದ ಜನತೆಯ ಆತ್ಮಸ್ಥರ್ಯವಾಗಿ ನಿಂತಿದೆ. ಶೂದ್ರ ತಪಸ್ವಿ ನಾಟಕ ಕುವೆಂಪುರವರ ಪ್ರಸಿದ್ಧ ನಾಟಕ ಕೃತಿಯಲ್ಲಿ ಒಂದು. ಮೂಲ ರಾಮಾಯಣದ ಕಥೆ ಆಧರಿಸಿ ಅಲ್ಪ ಸ್ವಲ್ಪ ಬದಲಾವಣೆಗಳೆಂದಿಗೆ ಈ ನಾಟಕವನ್ನು ಸಿದ್ದಪಡಿಸಲಾಗಿದೆಗಿದೆ. ಗುಣಕ್ಕೆ ಮಾತ್ಸರ್ಯ ಇರಬಾರದು. ಒಳ್ಳೆಯದು ಎಲ್ಲಿದ್ದರೂ ಅದನ್ನ ಗೌರವಿಸಬೇಕೆಂಬ ತತ್ವದ ಅಡಿಯಲ್ಲಿ ನಾಟಕ ರೂಪುಗೊಂಡಿರುವುದನ್ನ ಕಾಣಬಹುದಾಗಿದೆ.

bottom of page























